-->
Bookmark

Gajendragad : ಮೋದಿ ಉಪನಾಮ ಪ್ರಕರಣ, ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ : ಶ್ರೀಕಾಂತ್ ಅವಧೂತ್

Gajendragad : 

ಮೋದಿ ಉಪನಾಮ ಪ್ರಕರಣ, ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ : ಶ್ರೀಕಾಂತ್ ಅವಧೂತ್ 


ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಸುಪ್ರೀಂ ಕೋರ್ಟ್ ತೀರ್ಪನ್ನ ನರೇಗಲ್ಲ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಶ್ರೀಕಾಂತ್ ಅವಧೂತ್ ಸ್ವಾಗತಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು ವಿಧಿಸಿರುವ ಅನರ್ಹತೆ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ದ್ವೇಷದ ವಿರುದ್ಧ ಪ್ರೀತಿಯ ಗೆಲುವಾಗಿದೆ ಎಂದು ಬಣ್ಣಿಸಿದರು. ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಮತ್ತು ವಿಭಜಿಸಿ ಆಳುವ ರಾಜಕಾರಣದ ವಿರುದ್ಧ ರಾಹುಲ್ ಗಾಂಧಿ ಸಂಸತ್ತಿನಲ್ಲಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದರು. ಈ ಕಾರಣಕ್ಕಾಗಿಯೇ, ಕೇಂದ್ರ ಸರ್ಕಾರವು ಅವರನ್ನು ರಾಜಕೀಯವಾಗಿ ಗುರಿಯಾಗಿಸಲು ಮತ್ತು ಸಂಸತ್ತಿನಲ್ಲಿ ಅವರ ಉಪಸ್ಥಿತಿಯನ್ನು ತಡೆಯಲು ಹಾಗೂ 2024ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಸಂಚು ರೂಪಿಸಿದೆ. 
ಭಾರತ್ ಜೋಡೋ ಯಾತ್ರೆಯ ಯಶಸ್ಸಿನ ನಂತರ ಜನರ ಧ್ವನಿಯಾಗಿರುವ ರಾಹುಲ್ ಗಾಂಧಿಯವರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿತ್ತು. 
ಈ ಕಾರಣಕ್ಕಾಗಿ ಸೂರತ್ ನ್ಯಾಯಾಲಯದ ಶಿಕ್ಷೆ ಪ್ರಕಟವಾದ 24 ಗಂಟೆಯ ಒಳಗೆ ಕೇಂದ್ರ ಸರಕಾರದ ಆದೇಶದ ಮೇರೆಗೆ ರಾಹುಲ್ ಅವರ ಸಂಸದೀಯ ಸದಸ್ಯತ್ವವನ್ನು ಅಮಾನತುಗೊಳಿಸಲಾಗಿತ್ತು. ಆದರೆ ಈಗ ಸುಪ್ರೀಂ ಕೋರ್ಟ್ ಅವರಿಗೆ ಪರಿಹಾರವನ್ನು ನೀಡಿದೆ. ಮತ್ತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ ಎಂದರು.
Post a Comment

Post a Comment