-->
Bookmark

Gadag : ಅತಿಥಿ ಉಪನ್ಯಾಸಕರ ಜೀವನದೊಂದಿಗೆ ಆಟವಾಡಬೇಡಿ - ಗಣೇಶ್ ರಾಠೋಡ್

Gadag : ಅತಿಥಿ ಉಪನ್ಯಾಸಕರ ಜೀವನದೊಂದಿಗೆ ಆಟವಾಡಬೇಡಿ - ಗಣೇಶ್ ರಾಠೋಡ್
ಗದಗ : (Dec_15_2023)

ಅತಿಥಿ ಉಪನ್ಯಾಸಕರು ನಡೆಸುತ್ತುರುವ ಹೋರಾಟಕ್ಕೆ ಎಸ್.ಎಫ್.ಐ ಬೆಂಬಲ ಸೂಚಿಸಿದೆ. ಈ ಹಿಂದೆ, ನವೆಂಬರ್ 23ರಿಂದ ಅತಿಥಿ ಉಪನ್ಯಾಸಕರು ಹೋರಾಟ ನಡೆಸುತ್ತಿದ್ದಾರೆ. ಆದ್ರೆ, ಅವರ ಬೇಡಿಕೆಯನ್ನ ಇದುವರೆಗೂ ಈಡೇರಿಸಿಲ್ಲ. ಈಗ, ಸರ್ಕಾರ ಅತಿಥಿ ಉಪನ್ಯಾಸಕರ ಎಲ್ಲ ಬೇಡಿಕೆಯನ್ನ ಈಡೇರಿಸಬೇಕೆಂದು ರಾಜ್ಯ ಪದಾಧಿಕಾರಿ ಗಣೇಶ್ ರಾಠೋಡ್ ಹೇಳಿದರು. ಗದಗಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರನ್ನ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನವೆಂಬರ್ 23 ರಿಂದ ರಾಜ್ಯದಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಕೊರೋನ ಸಾಂಕ್ರಾಮಿಕ ಸಂದರ್ಭದಲ್ಲಿ ಖಾಸಗೀ ಕಾಲೇಜುಗಳ ಶುಲ್ಕವನ್ನು ಕಟ್ಟದೇ ಖಾಸಗೀ ಕಾಲೇಜು ತೊರೆದು ಸರ್ಕಾರಿ ಕಾಲೇಜಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಆದ್ರೆ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮತ್ತೆ ದಾಖಲಾತಿಯಲ್ಲಿ ಇಳಿಕೆಯಾಗಿರುತ್ತದೆ. ಈ ಮಧ್ಯಯೂ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಹಾಗೂ ಸಮಯಕ್ಕೆ ಸರಿಯಾದ ಸಾರಿಗೆ ಸೌಲಭ್ಯವಿಲ್ಲದೆ, ಗ್ರಾಮೀಣ ಭಾಗದಿಂದ ನಗರಕ್ಕೆ ಬಂದು  ಸಾವಿರಾರು ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಯನ ನಡೆಸಲು ಬರುತ್ತಿದ್ದಾರೆ. ಇಷ್ಟು ಕಷ್ಟಗಳ ಮದ್ಯ ವಿದ್ಯಾರ್ಥಿಗಳಿಗೆ ಪಾಠ ಮಾಡಲು ಇಲ್ಲಿ ಅತಿಥಿ ಉಪನ್ಯಾಸಕರೇ ಇಲ್ಲ. ಕಳೆದ ಕೆಲವು  ದಿನಗಳಿಂದ ಹೋರಾಟ ಮಾಡುತ್ತಿದ್ದು, ಸರ್ಕಾರ ಅವರ ಬೇಡಿಕೆ ಈಡೇರಿಸಬೇಕು. ಇಲ್ಲಾವಾದರೆ ರಾಜ್ಯವಾಪ್ತಿ ವಿದ್ಯಾರ್ಥಿಗಳು ಬಿದಿಗಿಳಿದು ಹೋರಾಟ ಮಾಡುತ್ತೆವೆ ಎಂದು ಎಚ್ಚರಿಸಿದರು.
ನಂತರ ಎಸ್ ಎಫ್ ಐ ನ ಜಿಲ್ಲಾ ಮುಖಂಡ ಚಂದ್ರು ರಾಠೋಡ್ ಮಾತನಾಡಿ, ಪ್ರತಿ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ಬೋಧನೆ ಮಾಡುವ ನೂರಾರು ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಪಾಠಗಳಿಂದ ದೂರ ಉಳಿಯುತ್ತಿದ್ದು, ಸಾಕಷ್ಟು ವಿದ್ಯಾರ್ಥಿಗಳ ಕಲಿಕೆಗೆ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆಯನ್ನು ದೂರ ಮಾಡುವುದಕ್ಕೆ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಖಾಯಂ ಉಪನ್ಯಾಸಕರ ಅಗತ್ಯವಿದೆ ಎಂದರು.
ಇದೇ ವೇಳೆ, ಅತಿಥಿ ಉಪನ್ಯಾಸಕ ನಾರಾಯಣ ಗೌಡ ಮಾತನಾಡಿ, ರಾಜ್ಯದ ಅತಿಥಿ ಉಪನ್ಯಾಸಕರ ಪರವಾಗಿ ನೀತಿ ನಿಯಮಾವಳಿಗಳನ್ನು ರೂಪಿಸಿ, ಸೇವಾ ಭದ್ರತೆ ಒದಗಿಸಬೇಕು.  ಸಕಾಲಕ್ಕೆ ವೇತನವನ್ನು ನೀಡಿ ಅವರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವೇ ಬಗೆಹರಿಸಬೇಕೆಂದು ಮನವಿ ಮಾಡಿದರು. 

ವಿದ್ಯಾರ್ಥಿ ಮುಖಂಡರಾದ ಕಾವ್ಯ ಪಾಟೀಲ್ ಮಾತನಾಡಿ, ಸ್ಥಳೀಯವಾಗಿ ಬಸ್ ಸಮಸ್ಯೆ, ಸ್ಕಾಲರ್ಶಿಪ್, ಶುಲ್ಕ ಸಮಸ್ಯೆ ಇದ್ದು ಈ ಕುರಿತು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆಯಲು ಒತ್ತಾಯಿಸಿದರು.

ವಿದ್ಯಾರ್ಥಿನಿ ಸುಮಾ ನಮಗೆ ತಕ್ಷಣ ತರಗತಿ ಪ್ರಾರಂಭಿಸಬೇಕೆಂದು ಒತ್ತಾಯಿಸಿದರು.

ವಿದ್ಯಾರ್ಥಿನಿ ಮಧು ಮತ್ತು ನೇತ್ರಾ ಅವರು ಮಾತನಾಡಿ ಕಳೆದ 22 ದಿನದಿಂದ ಕ್ಲಾಸ್ ನಡೆಯುತ್ತಿಲ್ಲ. ಪಾಲಕರು ನಮಗೆ ಕಾಲೇಜು ಬಿಡಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದಕ್ಕೆ ಅನಿವಾರ್ಯವಾಗಿ ಹೋರಾಟ ಮಾಡುತ್ತಿದ್ದೆವೆ ಎಂದರು.

 ಗದಗ ತಹಶಿಲ್ದಾರ್  ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ, ಮೇಲಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ಮಾಹಿತಿ ನೀಡಿದರು. 

ಹೋರಾಟದಲ್ಲಿ ವಿದ್ಯಾರ್ಥಿ ಮುಖಂಡರಾದ ನೇಹಾ, ಪಲ್ಲವಿ, ಸುಜಾತಾ, ಶೈಲಾ, ಮಂಜುಳಾ, ವೀಣಾ, ಭಾರತಿ, ನೇತ್ರಾ, ಮೇಘಾ, ರಕ್ಷಿತಾ, ತನುಜಾ, ವಿಜಯಲಕ್ಷೀ, ಆರತಿ, ಶ್ರವಾಣ, ಚಂದಾಭಿ ಹಾಗೂ ನೂರಾರು ವಿದ್ಯಾರ್ಥಿಗಳು ಮತ್ತು ಅತಿಥಿ ಉಪನ್ಯಾಸಕರಾದ ಡಾ. ಎಸ್ ಎಸ್ ಸರ್ವಿ, ಡಾ. ವಿ ಡಿ ಮುಳಗುಂದ, ನಾರಾಯಣ ಕರ್ಲವಾಡ, ಶ್ರೀನಿವಾಸ್ ಪೂಜಾರ್ ಸೇರಿದಂತೆ ಎಸ್.ಎಫ್.ಐ ಮುಖಂಡರು ಭಾಗವಹಿಸಿದ್ದರು.
Post a Comment

Post a Comment