ಅಲ್ಪ ಸಂಖ್ಯಾತರು ಹಾವೇರಿ_ಗದಗ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಬೆಂಬಲಿಸಲಿದ್ದಾರೆ ಎಂದು ಹಾವೇರಿ_ಗದಗ ಮತ್ತು ಬಾಗಲಕೋಟ ಲೋಕಸಭಾ ಕ್ಷೇತ್ರದ ಉಸ್ತುವಾರಿ ಮಕ್ತುಮಸಾಬ್ ಮುಧೋಳ್ ಹೇಳಿದ್ದಾರೆ. ಕಿರಾ ನ್ಯೂಸ್ ನೊಂದಿಗೆ ಮಾತನಾಡಿದ ಅವರು, ಹಾವೇರಿ ಲೋಕಸಭಾ ಕ್ಷೇತ್ರದ ಮತದಾರ ಈ ಬಾರಿ ಜೆಡಿಎಸ್ ಗೆ ಬೆಂಬಲಿಸುವ ಮುನ್ಸೂಚನೆ ಇದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಬಿಟ್ಟರೇ, ಬೇರೆಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ...
ಪಕ್ಷದಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಿದ್ದಕ್ಕೆ, ನನ್ನ ಕೆಲಸಕಾರ್ಯಗಳನ್ನ ಗುರುತಿಸಿ, ಹಾವೇರಿ_ಗದಗ ಮತ್ತು ಬಾಗಲಕೋಟ ಉಸ್ತುವಾರಿ ನೀಡಿದ್ದಾರೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ ವರಿಷ್ಠರು ನೀಡಿದ ಜವಾಬ್ದಾರಿಯನ್ನ ನಿರ್ವಹಿಸಿದ್ದೇನೆ. ಅದೇ ಕಾಯಕ ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ಮುಧೋಳ್ ಹೇಳಿದ್ದಾರೆ.
ಅಲ್ಪ ಸಂಖ್ಯಾತರ ಮೂಗಿಗೆ ತುಪ್ಪ ಸವರುವ ಕಾರ್ಯ ಕಾಂಗ್ರೆಸ್ ಮಾಡುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾರ ಉತ್ತರ ಕೊಡಲಿದ್ದಾನೆ ಎಂದು ಸ್ಪಷ್ಟಪಡಿಸಿದರು.
ನಾನು ಕೇವಲ ಅಲ್ಪ ಸಂಖ್ಯಾತರಿಗೆ ಸೀಮಿತನಾಗಿಲ್ಲ. ಎಲ್ಲ ಸಮುದಾಯದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಲಿಂಗಾಯತ ಮುಖಂಡರು, ಹಿಂದುಳಿದ ಸಮಾಜದ ಮುಖಂಡರು, ಅಲ್ಪಸಂಖ್ಯಾತ ನಾಯಕರೇಲ್ಲರೂ ಜೆಡಿಎಸ್ ಗೆ ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸವನ್ನ ವ್ಯಕ್ತಪಡಿಸಿದರು.
ಜೆಡಿಎಸ್, ಬಿಜೆಪಿ ಮೈತ್ರಿಯೂ ರಾಜ್ಯದಲ್ಲಿ ಕಮಾಲ್ ಮಾಡಲಿದೆ. ಲೋಕಸಭೆ ಚುಮಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದರು.
Post a Comment