-->
Bookmark

Bengaluru : "ಸುಮಾ" ಕನ್ನಡ ಚಲನಚಿತ್ರಕ್ಕೆ ಮೂಹೂರ್ತ

Bengaluru : "ಸುಮಾ" ಕನ್ನಡ ಚಲನಚಿತ್ರಕ್ಕೆ ಮೂಹೂರ್ತ

ಬೆಂಗಳೂರ : (Aprl_06_2024)

 ‘ಓಂಸಾಯಿ ಸಿನೆಮಾಸ್’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ ‘ಸುಮಾ’ ಸಿನಿಮಾದ ಮುಹೂರ್ತ ಸಮಾರಂಭ ಬೆಂಗಳೂರಿನ ತ್ಯಾಗರಾಜನಗರದ ಗಣಪತಿ  ದೇವಸ್ಥಾನದಲ್ಲಿ    ನೆರವೇರಿತು. 
       ಹಿರಿಯ ನಟ , ನಿರ್ದೇಶಕ ರವಿಕಿರಣ್ ಕ್ಯಾಮರಾ ಸ್ವಿಚ್ ಆನ್ ಮಾಡಿದರೆ, ನಿರ್ಮಾಪಕರಾದ ಸಂಜಯ್‌ಗೌಡ ಕ್ಲಾಪ್ ಮಾಡುವ ಮೂಲಕ ಸಿನಿಮಾದ ಚಿತ್ರೀಕರಣಕ್ಕೆ ಚಾಲನೆ ನೀಡಿದರು.     ಈಗಾಗಲೇ   ಕನ್ನಡದಲ್ಲಿ ‘ಶ್ರೀಕಬ್ಬಾಳಮ್ಮನ ಮಹಿಮೆ’, ‘ಮನೆ’, ‘ಬ್ಯಾಂಕ್ ಲೋನ್’, ‘ಸುಳಿ’ ಸೇರಿದಂತೆ ನಾಲ್ಕು ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ರಶ್ಮಿ ಎಸ್. ‘ಸುಮಾ’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.  ‘ಇದೊಂದು ಮಹಿಳಾ ಪ್ರಧಾನ ಕಥಾಹಂದರದ ಸಿನಿಮಾ. ‘ಸುಮಾ’ ಅಂದ್ರೆ ಸಂಪೂರ್ಣ ಮೊಗ್ಗು ಅಲ್ಲದ, ಸಂಪೂರ್ಣ ಅರಳಿಯೂ ಇರದಂತಹ ಹೂವು. ಈ ಸಿನಿಮಾದ ನಾಯಕಿಯ ಪಾತ್ರ ಕೂಡ ಹಾಗೇ ಇರುವಂಥದ್ದು. ನಮ್ಮ ನಡುವೆಯೇ ಇರುವಂಥ ಹುಡುಗಿಯೊಬ್ಬಳ ಅಂತರಂಗದ ಕಥೆ ಈ ಸಿನಿಮಾದಲ್ಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ನಾಯಕಿ ಮತ್ತು ಸಿನಿಮಾದ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಿದ್ದೇವೆ’ಎಂದು ನಿರ್ದೇಶಕಿ ರಶ್ಮಿ ತಿಳಿಸಿದರು.   
      ಇದೇ ಏಪ್ರಿಲ್ ತಿಂಗಳಿನಿಂದ ‘ಸುಮಾ’ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಲಿದ್ದು ಒಟ್ಟು ೨೫ ದಿನಗಳ ಕಾಲ ಒಂದೇ ಹಂತದಲ್ಲಿ ಮಂಡ್ಯ, ಮದ್ದೂರು, ಆಲಭುಜನಹಳ್ಳಿ, ಕೆ. ಎಂ ದೊಡ್ಡಿ, ನಗರಕೆರೆ ಸುತ್ತಮುತ್ತ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಮೈಸೂರು ಮೂಲದ ಪ್ರದೀಪ್ ಗೌಡ ‘ಸುಮಾ’ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದು, ಉಳಿದಂತೆ ಬಾಲರಾಜವಾಡಿ, ರೇಣು ಶಿಕಾರಿ, ಮುರಳೀಧರ್ ಡಿ. ಆರ್, ಕಾವ್ಯ ಪ್ರಕಾಶ್, ರೋಹಿಣಿ, ಸುನಂದ ಕಲಬುರ್ಗಿ, ರೇಣುಕುಮಾರ್ ಸಂಸ್ಥಾನಮಠ , ಅವಿನಾಶ ಗಂಜಿಹಾಳ,  ಶಿವಕುಮಾರ್ ಆರಾಧ್ಯ , ಹರಿಹರನ್ ಬಿ. ಪಿ ಮುಂತಾದವರು   ಅಭಿನಯಿಸುತ್ತಿದ್ದಾರೆ. 
      ಶಂಖು, ನಟರಾಜ್ ಛಾಯಾಗ್ರಹಣ, ಮುತ್ತುರಾಜ್ ಟಿ. ಸಂಕಲನ ,  ಸಿನಿಮಾದ ಹಾಡುಗಳಿಗೆ ಎನ್. ರಾಜು ಸಂಗೀತ , ಸತೀಶ್ ಜೋಶಿ ಹಾವೇರಿ ಸಾಹಿತ್ಯ ಮತ್ತು ಸಹ ನಿರ್ದೇಶನವಿದೆ. ಮೇಘನ ಹಳಿಯಾಳ ಹಾಡಿಗೆ ಧ್ವನಿಯಾಗಲಿದ್ದು, ಪತ್ರಿಕಾ ಸಂಪರ್ಕ ಕಾರ್ತಿಕ್ ಸುಧನ್, ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ ಅವರದಿದೆ. ಸಿನಿಮಾಕ್ಕೆ ರಂಗಸ್ವಾಮಿ ಟಿ (ರವಿ) ಸಹ ನಿರ್ಮಾಪಕರಾಗಿದ್ದಾರೆ.    ಚಿತ್ರತಂಡದ ಯೋಜನೆಯಂತೆ, ಇದೇ ಆಗಷ್ಟ್ ವೇಳೆಗೆ ‘ಸುಮಾ’ ಸಿನಿಮಾದ ಕೆಲಸಗಳನ್ನು ಪೂರ್ಣಗೊಳಿಸಿ, ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ. 
**
ವರದಿ:
ಡಾ.ಪ್ರಭು ಗಂಜಿಹಾಳ
ಮೊ: ೯೪೪೮೭೭೫೩೪೬
Post a Comment

Post a Comment