
Gajendragad : JT ಕಾಲೇಜಿನಲ್ಲಿ ರಾಷ್ಟೀಯ ಯುವ ದಿನಾಚರಣೆ : ಆರೋಗ್ಯ ಕಾಪಾಡಿಕೊಳ್ಳಲು ಸಲಹೆ

ಗಜೇಂದ್ರಗಡ : (Jan_12_2025)

ಜಗದ್ಗುರು ತೋಂಟದಾರ್ಯ ಪಿ.ಯು ಕಾಲೇಜು ಹಾಗೂ ವೆಂಕಟೇಶ್ವರ ಆಸ್ಪತ್ರೆ ಗಜೇಂದ್ರಗಡ ಇವರ ಸಹಯೋಗದಲ್ಲಿ ರಾಷ್ಟೀಯ ಯುವ ದಿನಾಚರಣೆ ನಿಮಿತ್ಯ ವಿದ್ಯಾರ್ಥಿಗಳಿಗೆ ಉಚಿತ ಅರೋಗ್ಯ ಹಾಗೂ ರಕ್ತ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.

ಡಾ.ನಿಂಗರಡ್ಡಿ ತಿರುಕಣ್ಣವರ್ ಮಾತನಾಡಿ, ಈಗಿನ ಕಾಲಘಟ್ಟದಲ್ಲಿ ಮನುಷ್ಯ ಒತ್ತಡ ಹಾಗೂ ಆಧುನಿಕ ಜೀವನ ಶೈಲಿಯಿಂದ ಅಧಿಕ ರಕ್ತದೊತ್ತಡ, ಮಧುಮೇಹ, ಮಾನಸಿಕ ಒತ್ತಡ ಸೇರಿದಂತೆ ಹಲವು ಕಾಯಿಲೆಗಳಿಂದ ನರಳುತ್ತಿದ್ದಾನೆ. ಕಾಲ ಕಾಲಕ್ಕೆ ತಪಾಸಣೆ ಹಾಗೂ ಚಿಕಿತ್ಸೆಯಿಂದ ರೋಗಗಳನ್ನು ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚಿ ಗುಣಪಡಿಸಬಹುದು ಎಂದರು. ಅಲ್ಲದೇ, ದುಷ್ಟಟಗಳಿಂದ ದೂರವಿದ್ದು ಕಾಯಿಲೆ ಬರುವ ಮುನ್ನವೇ ವಿದ್ಯಾರ್ಥಿಗಳು ಎಚ್ಚರ ವಹಿಸಿದರೆ ಅನಾರೋಗ್ಯದಿಂದ ಪಾರಾಗಬಹುದು ಎಂದು ಯುವ ಸಮೂಹಕ್ಕೆ ಸಲಹೆ ನೀಡಿದರು.